Tuesday, October 7, 2025
Homeಆಯ್ಕೆ/ನೇಮಕಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ನೂತನ ಅಧ್ಯಕ್ಷರಾಗಿ ಲಿಂಗರಾಜ್ ಬಿದರಕದಿ ಪದ ಗ್ರಹಣ.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ನೂತನ ಅಧ್ಯಕ್ಷರಾಗಿ ಲಿಂಗರಾಜ್ ಬಿದರಕದಿ ಪದ ಗ್ರಹಣ.

ವಿಜಯಪುರ:ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವಿಜಯಪುರ ಜಿಲ್ಲಾ ನೂತನ ಪದಾಧಿಕಾರಿಗಳ ಪದ ಗ್ರಹಣ ಸಮಾರಂಭವು ನಗರದ ಬೆಂಗಳೂರು ರೆಸ್ಟೋರೆಂಟ್ ಹಾಲ್ ನಲ್ಲಿ ನಡೆಯಿತು.
ಈ ಸಮಾರಂಭದಲ್ಲಿ ವಿಜಯಪುರ ಜಿಲ್ಲೆಯ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರ ಸಮಕ್ಷಮದಲ್ಲಿ ರಾಜ್ಯ ಸಮಿತಿ ಅಧ್ಯಕ್ಷರಾದ ಶ್ರೀ ಪಿ.ಕೃಷ್ಣೆಗೌಡ.ಇವರು ನೂತನ ಜಿಲ್ಲಾ ಅಧ್ಯಕ್ಷರನ್ನಾಗಿ ಈ ಹಿಂದೆ ಜಿಲ್ಲಾ ಪ್ರಧಾನಕಾರ್ಯದರ್ಶಿಯಾಗಿ ಸೇವೆಸಲ್ಲಿದ ಶ್ರೀ ಲಿಂಗರಾಜ್ ಬಿದರಕುಂದಿ ಯವರನ್ನು ಆಯ್ಕೆಮಾಡಿ ಘೋಷಿಸಿದರು.ಇವರೊಂದಿಗೆ ರಾಜ್ಯಸಮಿತಿಯ ಸತೀಶ್ ಎಮ್.ಹಾಗೂ ಬೆಂಗಳೂರು ನಗರ ಘಟಕದ ಅಧ್ಯಕ್ಷರು,ಉಪಾಧ್ಯಕ್ಷರು ಸಾತ್ ನೀಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಪ್ರಭು ಮಂಕಣಿ,ಬಾಪುಗಾಡ ಪಾಟೀಲ್, ಪ್ರಧಾನ ಕಾರ್ಯದರ್ಶಿ ಬಾವಾಸಾಬ್ ಹತ್ತರಕಾಳ್,ಸಂಕೇಶ್ ಪಟ್ನದ್, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಜಯಶ್ರೀ ಸವಕಾರ್ ಮತ್ತು ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು ಮತ್ತು ಎಲ್ಲ ತಾಲೂಕಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments